ತೊಡಿಕಾನ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

0

ತೊಡಿಕಾನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಪ್ರಗತಿಪರ ಕೃಷಿಕರು, ಶಾಲಾ ಹಳೆ ವಿದ್ಯಾರ್ಥಿಯಾದ ಗೌರಿಶಂಕರ ಭಟ್ ಗಾಳಿವನ ಇವರು ಒಂದು ಸಾವಿರ ಲೀಟರ್ ಸಾಮರ್ಥ್ಯದ ಸಿಂಟೆಕ್ ಟ್ಯಾಂಕನ್ನು ಕೊಡುಗೆಯಾಗಿ ನೀಡಿದರು.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ. ಬಿ ಹಾಗೂ ಮುಖ್ಯ ಶಿಕ್ಷಕ ಅರುಣ್ ಕುಮಾರ್ ರಿಗೆ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರಿನ ಟ್ಯಾಂಕ್ ನ್ನು ಹಸ್ತಾಂತರಿಸಿದರು. ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಸೌಮ್ಯ ಭಟ್, ಸಮಿತಿಯ ಸದಸ್ಯರು, ಮಕ್ಕಳ ಪೋಷಕರು,ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.