ಅರಂತೋಡು : ಮುಖ ತೊಳೆಯಲು ಹೋದ ವ್ಯಕ್ತಿ ಕಾಲು ಜಾರಿ ನೀರಿಗೆ ಬಿದ್ದು ಮೃತ್ಯು

0


ಬೆಳಿಗ್ಗೆ ಎದ್ದು ಮುಖ ತೊಳೆಯಲೆಂದು ಹೊಳೆ ಬದಿಗೆ ಹೋದ ವ್ಯಕ್ತಿಯೊಬ್ಬರು ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಜೂ. ೨೮ರಂದು ಬೆಳಿಗ್ಗೆ ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಸಂಭವಿಸಿದೆ.
ಅಡ್ಕಬಳೆಯ ಚನಿಯ ಎಂಬವರು ಬೆಳಿಗ್ಗೆ ೭ ಗಂಟೆಯ ವೇಳೆಗೆ ತನ್ನ ಮನೆ ಸಮೀಪದ ಹೊಳೆಗೆ ಹೋದಾಗ ಕಾಲುಜಾರಿ ಹೊಳೆಗೆ ಬಿದ್ದಿದ್ದು, ಇದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು ಚನಿಯರವರನ್ನು ನೀರಿನಿಂದ ಮೇಲೆತ್ತಿದ್ದದರಾದರೂ ಅವರು ಆಗಲೇ ಮೃತಪಟ್ಟಿದ್ದರೆಂದು ತಿಳಿದು ಬಂದಿದೆ. ಬಳಿಕ ಅರಂತೋಡು ಸಹಕಾರಿ ಸಂಘದ ಸಮೃದ್ಧಿಮಾರ್ಟ್‌ನ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಚನಿಯರಿಗೆ ೫೦ ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.