ಅಮೈ ಮಡಿಯಾರು : ಅಧಿವಕ್ತಾ ಪರಿಷತ್ತಿನ ವತಿಯಿಂದ ಪರಿಸರ ದಿನಾಚರಣೆ

0

ಅಧಿವಕ್ತಾ ಪರಿಷತ್ ಸುಳ್ಯ ಘಟಕದ ವತಿಯಿಂದ ಜೂ.22ರಂದು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಅಮೈ ಮಡಿಯಾರು ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ ರಾದ ಶ್ರೀಮತಿ ಪೂರ್ಣಿಮಾ ಸೂಂತೋಡು ಇವರು ಗಿಡ ನೆಟ್ಟು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪ್ರಶಾಂತ್ ಪಾನತ್ತಿಲ,
ಅಧಿವಕ್ತಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ರಾದ ನ್ಯಾಯವಾದಿ ಜಗದೀಶ್ ಡಿ ಪಿ, ನ್ಯಾಯವಾದಿ ಶ್ಯಾಮ್ ಪಾನತ್ತಿಲ, ನ್ಯಾಯವಾದಿ ಶ್ರೀ ಚಂದ್ರಶೇಖರ ಉದ್ದಂತಡ್ಕ, ಎಸ್ ಡಿ ಎಂ ಸಿ ಅಧ್ಯಕ್ಷ ರಾದ ಲೋಕೇಶ್ ಕೊಟ್ಯಾನ್ , ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಮಕ್ಕ,ಸತ್ಯಸಾಯಿ ಸಂಸ್ಥೆಯ ಜಯರಾಮ್ ಭಟ್, ಉಮೇಶ್, ಶಾಲೆಯ ಶಿಕ್ಷಕಿ ಶ್ರೀಮತಿ ಗೀತಾ, ಉಪಸ್ಥಿತರಿದ್ದು ಸಹಕರಿಸಿದರು ಅಧಿವಕ್ತಾ ಪರಿಷತ್ ನ ಸುಳ್ಯ ಘಟಕದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಸಂದೀಪ್ ಮದುವೆಗದ್ದೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.