ಮುರುಳ್ಯದ ಸೃಜನ್ ಕೆ.ಆರ್.ಭೂಸೇನೆಗೆ ಆಯ್ಕೆ- ನಾಳೆ ಕರ್ತವ್ಯಕ್ಕೆ

0


ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಶ್ರೀಮತಿ ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಭೂಸೇನೆಗೆ ಆಯ್ಕೆಯಾಗಿ ಕರ್ತವ್ಯಕ್ಕಾಗಿ ನಾಳೆ ಅಸ್ಸಾಂಗೆ ತೆರಳಲಿದ್ದಾರೆ.
ಸೃಜನ್ ರವರು ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು.ಸಿ.ಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಆರ್ಮಿ ಪರೀಕ್ಷಾ ತರಬೇತಿಯನ್ನು ಪಡೆದಿರುತ್ತಾರೆ.