ಸುಬ್ರಹ್ಮಣ್ಯ: ಅಸೌಖ್ಯದಿಂದ ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿ

0

ಚಿಕಿತ್ಸೆ ಕೊಡಿಸಿ ರಕ್ಷಿಸಿದ ಪೊಲೀಸರು ಹಾಗೂ ಸಾರ್ವಜನಿಕರು

ಸುಬ್ರಹ್ಮಣ್ಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅನಾರೋಗ್ಯಕ್ಕೆ ಒಳಗಾಗಿ ಒದ್ದಾಡುತ್ತಿರುವುದವರನ್ನು ಪೊಲೀಸರು ಮತ್ತು ಸಾರ್ವಜನಿಕರ ನೆರವಿನೊಂದಿಗೆ ಚಿಕಿತ್ಸೆ ಕೊಡಿಸಿದ ಘಟನೆ ಜೂ.೨೮ ರಂದು ನಡೆದಿದೆ.

ಸುಬ್ರಹ್ಮಣ್ಯದ ವನದುರ್ಗ ದೇವಿ ದೇವಸ್ಥಾನದ ಬಳಿ ಬಾಯಲ್ಲಿ ನೊರೆ ಬಂದು ಅನಾಮಧೇಯ ವ್ಯಕ್ತಿಯೊಬ್ಬರು ಒದ್ದಾಡುತ್ತಿದ್ದರು. ಇದನ್ನು ಮನಗಂಡ ವ್ಯಕ್ತಿಯೋರ್ವರು ಪೊಲೀಸರ ಸಹಾಯವಾಣಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯದ ಎಸ್.ಐ ಕಾರ್ತಿಕ್ ನೇತೃತ್ವದ ಪೋಲಿಸರು ಆಗಮಿಸಿ ಸಕಾಲಕ್ಕೆ ವೈದ್ಯಕೀಯ ಸೌಲಭ್ಯ ಇಲ್ಲದ ಕಾರಣ ಯುವ ತೇಜಸ್ ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಇದಕ್ಕೆ ಸ್ಥಳೀಯರಾದ ದೀಪಕ್ ನಂಬಿಯರ್, ಸುಹಾಸ್. ಎಸ್ ಎಸ್, ಜೀವನ್, ಶಿವ ಭಟ್, ದಿನೇಶ್ ಭಟ್, ಶಿವಕುಮಾರ್ ಮತ್ತಿತರರು ರಕ್ಷಣೆಗೆ ಸಹಕರಿಸಿದರು.