ಅಯ್ಯನಕಟ್ಟೆ ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಡಾ. ಕಿಶನ್ ರಾವ್ ಬಾಳಿಲ ಇವರಿಂದ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳ ವಿತರಣೆ

0

ಅಯ್ಯನಕಟ್ಟೆಯ
ಗೋಕುಲ ಕಾಂಪ್ಲೆಕ್ಸ್ ನ ಮಾಲಕರಾದ ರಾಮಚಂದ್ರ ರಾವ್ ಮತ್ತು ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ. ಕಿಶನ್ ರಾವ್ ಬಾಳಿಲ ಮತ್ತು ಸಿಬ್ಬಂದಿ ವರ್ಗದವರು ಅಯ್ಯನಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ 100 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು.


ಈ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.