ಅರಂತೋಡು: ನೆಹರೂ ಸ್ಮಾರಕ ಪ.ಪೂ. ಕಾಲೇಜಿನಲ್ಲಿ ಪೋಷಕರ ಸಭೆ

0

ಅರಂತೋಡಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.29ರಂದು ನಡೆಯಿತು.


ಕಾಲೇಜಿನ ಸಂಚಾಲಕ ಕೆ. ಆರ್. ಗಂಗಾಧರ್ ಅವರು ಮಾತನಾಡಿ, ಎರಡು ವರ್ಷಗಳ ಪಿಯುಸಿ ಶಿಕ್ಷಣ ಮಕ್ಕಳ ಕಲಿಕೆಯ ಮಹತ್ವದ ಘಟ್ಟವಾಗಿದೆ. ಆದ್ದರಿಂದ ಮಕ್ಕಳ ಕಲಿಕೆಗೆ ಪೋಷಕರು ವಿಶೇಷ ಗಮನ ನೀಡಬೇಕೆಂದು ಹೇಳಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಸ್ವಾಗತಿಸಿ, ರಸಾಯನಶಾಸ್ತ್ರ ಉಪನ್ಯಾಸಕ ಲಿಂಗಪ್ಪ ಪೂಜಾರಿ ವಂದಿಸಿದರು. ವಿದ್ಯಾರ್ಥಿಗಳಾದ ಶ್ರೇಯಾ,ಅನ್ವಿತಾ ಮತ್ತು ಚೈತನ್ಯ ಪ್ರಾರ್ಥಿಸಿದರು.
ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.