ಹರಿಹರ ಪಲ್ಲತಡ್ಕ ಗ್ರಾಮ ಸಭೆ

0

ರಸ್ತೆ, ಚರಂಡಿ, ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚೆ

ಹರಿಹರ ಪಲ್ಲತಡ್ಕ ಗ್ರಾ.ಪಂ ಸಭೆ ಜೂ.29 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಭೆಯು ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷ ವಿಜಯ ಕುಮಾರ್ ಅಂಙಣ ವಹಿಸಿದ್ದರು. ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾ.ಪಂ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು ಪಿ, ಶಿಲ್ಪಾ ಕೊತ್ನಡ್ಕ ವೇದಿಕೆಯಲ್ಲಿದ್ದರು. ತೋಟಗಾರಿಕಾ ಇಲಾಖೆಯು ಅರಬ್ಬಣ್ಣ ಪೂಜಾರ್ ನೋಡೆಲ್ ಅಧಿಕಾರಿಯಾಗಿದ್ದರು. ಪಿ.ಡಿ.ಒ ಶ್ಯಾಮ್ ಪ್ರಸಾದ್ ಸ್ವಾಗತಿಸಿ, ಪ್ರಸ್ತಾವಿಕ ಮಾತನ್ನಾಡಿದರು. ಪಂಚಾಯತ್ ಸಿಬ್ಬಂದಿ ಪ್ರೀಯ ಕಲ್ಲೇಮಠ ವರದಿ ವಾಚಿಸಿದರು.