ಕಲ್ಲುಗುಂಡಿ ಸವೇರಪುರ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ಸಭೆ

0


ಕಲ್ಲುಗುಂಡಿ ಸವೇರಪುರ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಿದ್ಯಾ ಸಂಸ್ಥೆಯ ಸಂಚಾಲಕರಾದ ವಂ. ಫಾದರ್ ಪಾವ್ಲ್ ಕ್ರಾಸ್ತಾ ರವರು ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರೋಟರಿ ವಿದ್ಯಾ ಸಂಸ್ಥೆ ಸುಳ್ಯ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಅಚ್ಚುತ ಅಟ್ಲೂರು ರವರು ಆಗಮಿಸಿ ಶಿಕ್ಷಕ, ವಿದ್ಯಾರ್ಥಿ ಹಾಗೂ ಪೋಷಕರ ನಡುವಿನ ಬಾಂಧವ್ಯ ಹೇಗಿರಬೇಕು ಎಂಬುದನ್ನು ಬಹಳ ವಿವರವಾಗಿ ತಿಳಿಸಿಕೊಟ್ಟರು.

ವೇದಿಕೆಯಲ್ಲಿ ಗೌರವಾನ್ವಿತ ಅತಿಥಿಗಳಾಗಿ ಚೇತನ್ ಹಾರಂಬಿ 2023 – 24ನೇ ಸಾಲಿನ ಶಿಕ್ಷಕ ರಕ್ಷಕ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರು, ಸಿಸ್ಟರ್ ಅನಿತಾ ಫೆರ್ನಾಂಡಿಸ್ ಮುಖ್ಯೋಪಾಧ್ಯಾಯಿನಿ ಸವೇರಪುರ ಆಂಗ್ಲ ಮಾಧ್ಯಮ ಶಾಲೆ ಇವರು ಉಪಸ್ಥಿತರಿದ್ದರು. ಈ ಸಭೆಯ ಸ್ವಾಗತ ಭಾಷಣವನ್ನು ಶಿಕ್ಷಕಿ ಶ್ರೀಮತಿ ಇಂದಿರಾವತಿ,
ವಂದನಾರ್ಪಣೆಯನ್ನು ಶಿಕ್ಷಕಿ ಶ್ರೀಮತಿ ವನಿತಾ ರವರೂ ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಪ್ರಜ್ವಲ್ ರವರು ನಡೆಸಿಕೊಟ್ಟರು. ಪೋಷಕ ವರ್ಗದವರು ಉಪಸ್ಥಿತರಿದ್ದರು. ಸಭೆಯಲ್ಲಿ ನೂತನ ಶಿಕ್ಷಕ ರಕ್ಷಕ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.