ದಾಸರಬೈಲು ಶಾಲೆಗೆ ಪುಸ್ತಕ ಕೊಡುಗೆ

0

ಮರ್ಕಂಜದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದಾಸರಬೈಲು ಶಾಲೆಗೆ ಅಕ್ಷರ ಬರವಣಿಗೆ ಯೋಜನೆಯನ್ನು ಪ್ರೋತ್ಸಹಿಸುವ ನಿಟ್ಟಿನಲ್ಲಿ ಎಸ್.ಡಿ.ಎಂ.ಸಿ. ಮಾಜಿ ಉಪಾಧ್ಯಕ್ಷ ಹೇಮಾಕುಮಾರ ಜೋಗಿಮೂಲೆ ಇವರು ದಾನಿಗಳಿಂದ ಸಂಗ್ರಹಿಸಿದ ಸುಮಾರು 3,500 ಮೌಲ್ಯ ದ ಪುಸ್ತಕ ಹಾಗೂ ಬರವಣಿಗೆ ಸಾಮಗ್ರಿ ಗಳನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.