ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾಳುಮೆಣಸು ಶುಚಿ ಗೊಳಿಸುವ ಯಂತ್ರ ಬಿಡುಗಡೆ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾಳುಮೆಣಸು ಶುಚಿ ಗೊಳಿಸುವ ಯಂತ್ರದ ಬಿಡುಗಡೆ ಕಾರ್ಯಕ್ರಮ ಜೂ.29 ರಂದು ನಡೆಯಿತು.

ಸಂಘದ ಅಧ್ಯಕ್ಷ ಗಣೇಶ್ ಪೈ ಬಿ ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷ ಕೆ ರಘುನಾಥ ರೈ, ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ ಸಿ, ಸುಬ್ರಹ್ಮಣ್ಯ ಕುಳ, ಲಿಗೋಧರ ಆಚಾರ್ಯ ಎನ್, ಶ್ರೀ ಕೃಷ್ಣ ಭಟ್ ಪಟೋಳಿ, ವಾಚಣ್ಣ ಕೆರೆಮೂಲೆ, ಚಿನ್ನಪ್ಪ ಗೌಡ ಚೊಟ್ಟೆಮಜಲು, ಕಿಟ್ಟಣ್ಣ ಪೂಜಾರಿ ಕಾಂಜಿ, ಮುದರ ಐವತೊಕ್ಲು, ಶ್ರೀಮತಿ ಮೋಹಿನಿ ಬೊಳ್ಮಲೆ, ಶ್ರೀಮತಿ ಹೇಮಲತಾ ಚಿದ್ಗಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ಪಲ್ಲೋಡಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದಲ್ಲಿ ಕೃಷಿಕರಿಗೆ ಅನುಕೂಲಕ್ಕಾಗಿ ಕಾಳು ಮೆಣಸು ಗೆರೆಯಿಂದ ಬೇರ್ಪಡಿಸುವ ಯಂತ್ರ, ಹಾರೆ, ಪಿಕ್ಕಾಸು ಕೈಗಾಡಿ, ಕಾಳು ಮೆಣಸು ಶುಚಿ ಸುರುಳಿ ಯಂತ್ರ, ಅಡಿಕೆ ಮರ ಏರುವ ಸೈಕಲ್ ಇತ್ಯಾದಿ ಕೃಷಿ ಉಪಕರಣಗಳನ್ನು ಬಾಡಿಗೆ ನೆಲೆಯಲ್ಲಿ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.