ಕಳಂಜ :ವಿಷ್ಣು ನಗರ ಅಂಗನವಾಡಿ ಕೇಂದ್ರದಲ್ಲಿ ನಿರ್ಗಮಿತ ಅಂಗನವಾಡಿ ಕಾರ್ಯಕರ್ತೆ ರಂಜಿತ ರೈ ಯವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

0

ಕಳಂಜ ವಿಷ್ಣುನಗರ ಅಂಗನವಾಡಿ ಕೇಂದ್ರದಲ್ಲಿ ನಿರ್ಗಮಿತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ ಜೂ. 29 ರಂದು ವಿಷ್ಣುನಗರ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕಳಂಜ ಗ್ರಾ.ಪಂ ಸದಸ್ಯರಾದ ಗಣೇಶ್ ರೈ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಅಕ್ಷತಾ, ಪ್ರಸ್ತುತ ಪ್ರಭಾರ ಅಂಗನವಾಡಿ ಕಾರ್ಯಕರ್ತೆಯಾಗಿರುವ ದೀಪ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಗ್ರಾ. ಪಂ ಸದಸ್ಯ ಗಣೇಶ್ ರೈ ರಂಜಿತಾರವರನ್ನು ಸನ್ಮಾನಿಸಿದರು. ಶ್ರೀ ಶಕ್ತಿ ಸಂಘದ ಸದಸ್ಯರು, ಮತ್ತು ಪೋಷಕರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿಯ ಸದಸ್ಯರು, ಸ್ತ್ರಿಶಕ್ತಿ ಸಂಘದ ಪದಾಧಿಕಾರಿಗಳು, ಸಿಸ್ಟರ್ ಬೇಬಿ, ಆಶಾ ಕಾರ್ಯಕರ್ತೆ ಜಯಂತಿ, ಮಕ್ಕಳು, ಪೋಷಕರು ಮತ್ತು ಊರವರು ಉಪಸ್ಥಿತರಿದ್ದರು. ಪೋಷಕಿ ಪುಷ್ಪಾ ಸ್ವಾಗತಿಸಿ, ಸ್ತ್ರಿ ಶಕ್ತಿ ಸಂಘದ ಪುಷ್ಪಾ ವಂದಿಸಿದರು. ರಮ್ಯ ಸತೀಶ್ ಕಾರ್ಯಕ್ರಮ ನಿರೂಪಿಸಿದರು.