ದೇವಚಳ್ಳ ಶಾಲೆ‌ಯಲ್ಲಿ ಶ್ರಮದಾನ

0

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ‌ ದೇವಚಳ್ಳದಲ್ಲಿ ಶತಮಾನೋತ್ಸವ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ಇಂದು ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಯ ಅಧ್ಯಕ್ಷ ಜಯಾನಂದ ಪಟ್ಟೆ, ಮುಖ್ಯೋಪಾಧ್ಯಾಯರಾದ ಶ್ರೀಧರ ಗೌಡ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸೇವಾ ದೀಕ್ಷಿತೆ ಯಶೋದಾ ಪಟ್ಟೆ, ಹಾಗೂ ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಒಡಿಯೂರು ಗ್ರಾಮವಿಕಾಸ ಯೋಜನೆಯ ಸದಸ್ಯರು ಉಪಸ್ಥಿತರಿದ್ದು, ಶ್ರಮದಾನದಲ್ಲಿ ಪಾಲ್ಗೊಂಡರು.‌