ಕನಕಮಜಲು: ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಸ್ವಾಗತಿಸಿದ ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರು

0

ಸುಳ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡು ಇತ್ತೀಚೆಗೆ ಉದ್ಘಾಟನೆಗೊಂಡ ಭಾರತೀಯ ಜನತಾ ಪಾರ್ಟಿಯ ನೂತನ ಕಾರ್ಯಾಲಯಕ್ಕೆ ಆಗಮಿಸುತ್ತಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಕನಕಮಜಲು ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರು ಸ್ವಾಗತಿಸಿ, ಸುಳ್ಯಕ್ಕೆ ಬರಮಾಡಿಕೊಂಡರು.

ಲೋಕಸಭಾ ಸದಸ್ಯರಾದ ಬಳಿಕ ಇದೇ ಮೊದಲ ಬಾರಿಗೆ ಸುಳ್ಯಕ್ಕೆ ಆಗಮಿಸುತ್ತಿದ್ದ ಅವರನ್ನು ಕನಕಮಜಲಿನಲ್ಲಿ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಜ್ಜಾವರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಹೇಮಂತ್ ಮಠ, ಬಿಜೆಪಿ ಮಹಿಳಾ ಕಾರ್ಯಕರ್ತೆ ಗುಣವತಿ ಕೊಲ್ಲಂತಡ್ಕ, ಬೂತ್ ಸಮಿತಿ ಅಧ್ಯಕ್ಷ ಜಗನ್ನಾಥ ಮಾಣಿಮಜಲು, ಲಕ್ಷ್ಮೀನಾರಾಯಣ ಕಜೆಗದ್ದೆ, ನಾರಾಯಣ ಬೊಮ್ಮೆಟ್ಟಿ,ಹರೀಶ್ ಮೂರ್ಜೆ, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.