ಇಂದು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಪದಗ್ರಹಣ

0

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ 2024- 25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಚಾರ್ಟರ್ ನೈಟ್ ಸಮಾರಂಭವು ಜು.1ರಂದು ನಡೆಯಲಿದೆ ಎಂದು ಸುಬ್ರಹ್ಮಣ್ಯದಲ್ಲಿ ಜೂ. 29 ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮವು ಏನೆಕಲ್ ನ ಸಂತೃಪ್ತಿ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿರುವುದು. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317 ಡಿ ದ್ವಿತೀಯ ಉಪ ರಾಜ್ಯಪಾಲ ಹೆಚ್. ಎಂ. ತಾರಾನಾಥ್ ನೆರವೇರಿಸಿಕೊಡುವರು. ಚಾರ್ಟರ್ ನೈಟ್ ಕಾರ್ಯಕ್ರಮವನ್ನು ಪೂರ್ವ ರಾಜ್ಯಪಾಲ ಎಂ.ಬಿ. ಸದಾಶಿವ ನಡೆಸಿಕೊಡಲಿರುವರು. ಈ ಕಾರ್ಯಕ್ರಮದಲ್ಲಿ ಮರ್ದಾಳದ ಬೆತನಿ ಜೀವನ್ ಜ್ಯೋತಿ ವಿಶೇಷ ಚೇತನ ಮಕ್ಕಳಿಗೆ ಶಾಲೆಯ ಮಧ್ಯಾಹ್ನದ ಭೋಜನದ ಅನ್ನದಾನಕ್ಕೆ ರೂ.10,000 ಧನಸಹಾಯ ನೀಡಲಾಗುವುದು. ದೇವರ ಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಗೆ ಪೀಠೋಪಕರಣ ಕೊಡುಗೆ ನೀಡಲಾಗುವುದು. ಕುಮಾರಸ್ವಾಮಿ ವಿದ್ಯಾಲಯದ ಮತ್ತು ಎಸ್. ಎಸ್. ಪಿ.ಯು. ವಿದ್ಯಾ ಸಂಸ್ಥೆಯ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದೆಂದು ಲಯನ್ಸ್ ಕ್ಲಬ್ ನ ಅಧ್ಯಕ್ಷ ರಾಮಚಂದ್ರ ಪಳಂಗಾಯ, ಸ್ಥಾಪಕ ಅಧ್ಯಕ್ಷ ಪ್ರೊ. ಕೆ .ಆರ್. ಶೆಟ್ಟಿಗಾರ್, ನೂತನ ಅಧ್ಯಕ್ಷ ರಾಜೇಶ್ ಎನ್. ಎಸ್. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.