ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಸತ್ಯ ನಾರಾಯಣ್ ವರ್ಗಾವಣೆ

0

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದ ಸತ್ಯನಾರಾಯಣ್ ರವರು ವರ್ಗಾವಣೆಗೊಂಡಿದ್ದಾರೆ.

ಅವರು ಚಿಕ್ಕಮಂಗಳೂರು ಆಲ್ದೂರು ವೃತ್ತ ನಿರೀಕ್ಷಕರಾಗಿ ಸೇವೆಯಲ್ಲಿದ್ದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಅವರನ್ನು ವರ್ಗಾಯಿಸಲಾಗಿತ್ತು. ಅವರ ವರ್ಗಾವಣೆಯಿಂದ ಸುಳ್ಯಕ್ಕೆ ನೂತನ ವೃತ್ತ ನಿರೀಕ್ಷಕರು ಬರಲಿದ್ದಾರೆ ಎಂದು ತಿಳಿದು ಬಂದಿದೆ.