ವಿನೋಬನಗರ :ಪತ್ನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಸುಳ್ಯ ಪೊಲೀಸರು

0

ನ್ಯಾಯಾಂಗ ಬಂಧನ ವಿಧಿಸಿದ ಸುಳ್ಯ ನ್ಯಾಯಾಲಯ

ಪತಿ ಪತ್ನಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ನಡೆದು ಪತಿಯೇ ಪತ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ತನಿಖೆ ನಡೆಸಿದ ನ್ಯಾಯಾಲಯ ಆರೋಪಿ ನವೀನ್ ಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ವಿನೋಬನಗರದ ನವೀನ್ ಕುಮಾರ್ ಹಾಗೂ ಅವರ ಪತ್ನಿ ಅಶ್ವಿನಿ ಅವರ ಮಧ್ಯೆ ಜೂ.29ರಂದು ರಾತ್ರಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ನವೀನರು ಅವರ ಪತ್ನಿ ಅಶ್ವಿನಿ ಅವರಿಗೆ ಚೂರಿಯಿಂದ ಇರಿದಿದ್ದರೆನ್ನಲಾಗಿದೆ.

ಈ ವೇಳೆ ಅಶ್ವಿನಿ ಅವರು ತಪ್ಪಿಸಲು ಯತ್ನಿಸಿದ ವೇಳೆ ಅವರ ಬೆನ್ನಿನ ಭಾಗಕ್ಕೆ ಚೂರಿ ಇರಿತವಾಗಿದ್ದು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಆದರೆ ನವೀನ ಆ ಬಳಿಕ ಮನೆಗೂ ಬಾರದೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ.

ಈ ಬಗ್ಗೆ ಆತನ ವಿರುದ್ಧ ಅಶ್ವಿನಿಯವರ ತಂದೆ ವಾಸುದೇವ ನಾಯ್ಕ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.