ಯೇನೆಕಲ್ಲು ಸಹಕಾರಿ ಸಂಘದ ಚುನಾವಣೆ

0

ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 27 ರಂದು ನಡೆದಿದ್ದು, 12 ಸ್ಥಾನಗಳಲ್ಲಿ ಒಂದು ಸ್ಥಾನವನ್ನಷ್ಟೇ ಪಡೆದುಕೊಂಡ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆಯವರ ವಿಜಯೋತ್ಸವ ಜ. 27ರಂದು ಸಂಜೆ ನಡೆಯಿತು.

ಕಾಂಗ್ರೆಸ್ ಹಿರಿಯ ನಾಯಕ ಶಿವರಾಮ ರೈ, ಹರೀಶ್ ಇಂಜಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಶೋಕ್ ನೆಕ್ರಾಜೆಯವರ ಅನೇಕ ಬೆಂಬಲಿಗರು ವಿಜಯೋತ್ಸವದಲ್ಲಿ ಪಾಲ್ಗೊಂಡು ಅಭಿನಂದಿಸಿದರು.