ಆಲೆಟ್ಟಿ ಶ್ರೀ ಸದಾಶಿವ ದೇವರ ಕಾಲಾವಧಿ ಜಾತ್ರೋತ್ಸವವು ಫೆ.13 ರಿಂದ 17 ರ ತನಕ ನಡೆಯಲಿದ್ದು ಇಂದು ಬೆಳಗ್ಗೆ ಗೊನೆ ಮುಹೂರ್ತ
ನಡೆಯಿತು.
ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯ ರವರು ಪ್ರಾರ್ಥನೆ ನೆರವೇರಿಸಿದ ಬಳಿಕ ಮುಹೂರ್ತದ ಗೊನೆ ಕಡಿಯಲಾಯಿತು.















ಈ ಸಂದರ್ಭದಲ್ಲಿ ಮೊಕ್ತೇಸರರಾದ ಹೇಮಚಂದ್ರ ಬೈಪಡಿತ್ತಾಯ, ಶ್ರೀಪತಿ ಬೈಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಸದಸ್ಯರಾದ ಸತೀಶ್ ಕುಂಭಕೋಡು, ಅಚ್ಚುತ ಮಣಿಯಾಣಿ ಆಲೆಟ್ಟಿ, ಹರಿಪ್ರಸಾದ್ ಗಬ್ಬಲ್ಕಜೆ, ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ,
ಭಜನಾ ಸಂಘದ ಉಪಾಧ್ಯಕ್ಷ ಶ್ರೀನಾಥ್ ಆಲೆಟ್ಟಿ,ಸದಸ್ಯರಾದ ಲಕ್ಷ್ಮಣ ಗೌಡ ಪರಿವಾರ, ನವೀನ್ ಕುಮಾರ್ ಆಲೆಟ್ಟಿ, ಮಹಾಬಲ ರೈ ಆಲೆಟ್ಟಿ, ದಯಾನಂದ ಪತ್ತುಕುಂಜ, ಲಿಂಗಪ್ಪ ಗೌಡ ಪರಿವಾರ, ಶ್ರೀಮತಿ ಯಮುನಾ ಆಲೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.










