
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ
ಫೆ.7ರಂದು ಸಂಜೆ ದೇಗುಲದಿಂದ ಶ್ರೀ ಕಾಚುಕುಜುಂಬ, ಶ್ರೀ ಉಳ್ಳಾಕುಲು ದೈವಗಳ ಭಂಡಾರ ವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿ ಬೈಲಿಗೆ ಹೋಗಿ ಧ್ವಜಾರೋಹಣ , ಶ್ರೀ ಕಾಚುಕುಜುಂಬ ದೈವದ ನೇಮ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು.
















.ಫೆ.8 ರಂದು ಮುಂಜಾನೆ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ ನಡೆಯಿತು .

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು,ಉತ್ಸವ ಸಮಿತಿ ಸಂಚಾಲಕರು,ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.
ಮಧ್ಯಾಹ್ನ ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ ,ಮಹಾಪೂಜೆ ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ಜರುಗಲಿದೆ. ರಾತ್ರಿ ಶಿರಾಡಿ ದೈವದ ಬಂಡಾರ ಬರುವುದು.ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವ ನೇಮ, ಶ್ರೀ ರುದ್ರ ಚಾಮುಂಡಿ ದೈವದ ನೇಮ ಜರುಗಲಿದೆ.










