ವ್ಯವಸ್ಥಾಪನ ಸಮಿತಿ ನೂತನ ಆಡಳಿತ ಮಂಡಳಿಯಿಂದ ಅಧಿಕಾರ ಸ್ವೀಕಾರ
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ನೂತನ ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು ಅವರು ಆಯ್ಕೆಯಾಗಿದ್ದು, ದೇವಸ್ಥಾನದ ಆಡಳಿತಾಧಿಕಾರಿಯಿಂದ ನೂತನ ಆಡಳಿತ ಮಂಡಳಿಯವರು ಅಧಿಕಾರ ಸ್ವೀಕರಿಸಿದರು.
ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ಫೆ. 12ರಂದು ಬೆಳಿಗ್ಗೆ ನಡೆದ ನೂತನ ಸದಸ್ಯರ ಸಭೆಯಲ್ಲಿ ಹರಿಪ್ರಕಾಶ್ ಅಡ್ಕಾರು ಅವರನ್ನು ನೂತನ ಅಧ್ಯಕ್ಷರಾಗಿ ಸದಸ್ಯರಾದ ಹೇಮಚಂದ್ರ ಕುತ್ಯಾಳ ಅವರು ಸೂಚಿಸಿದರು. ಇನ್ನೋರ್ವ ಸದಸ್ಯ ವಿಜಯಕುಮಾರ್ ನರಿಯೂರು ಅವರು ಅನುಮೋದಿಸಿದರು.
















ದೇವಸ್ಥಾನದ ಆಡಳಿತಾಧಿಕಾರಿ ಅಜ್ಜಾವರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಮಾಲ ಅವರು ನೂತನ ವ್ಯವಸ್ಥಾಪನ ಸಮಿತಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರುಗಳಾದ ಶ್ರೀ ಕ್ಷೇತ್ರದ ಪ್ರದಾನ ಅರ್ಚಕ ಶ್ರೀವರ ಪಾಂಗಣ್ಣಾಯ, ಪುರುಷೋತ್ತಮ ಗೌಡ ನಂಗಾರು, ವಿನೋದ್ ಕುಮಾರ್ ಮಹಾಬಲಡ್ಕ, ಹೇಮಚಂದ್ರ ಕುತ್ಯಾಳ, ವಿಜಯಕುಮಾರ್ ನರಿಯೂರು, ಶ್ರೀಮತಿ ಸೌಮ್ಯಲಕ್ಷ್ಮಿ ರವಿಶಂಕರ್ ಬೈತಡ್ಕ, ಶ್ರೀಮತಿ ಸುಮತಿ ದಿವಾಕರ ಹುಲಿಮನೆ, ಶ್ರೀಮತಿ ಪವಿತ್ರ ಭಾರತಿ ಐತ್ತಪ್ಪ ನಾಯ್ಕ ಕೋನಡ್ಕಪದವು, ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಗಣೇಶ್ ರೈ ಕುಕ್ಕಂದೂರು, ಉತ್ಸವ ಸಮಿತಿ ಕೋಶಾಧಿಕಾರಿ ವಿಜಯಕುಮಾರ್ ಕೋಡ್ತಿಲು, ಪ್ರಧಾನ ಕಾರ್ಯದರ್ಶಿ ಗೋಪಾಲ ವಿ. ಪದವು, ಪರಿವಾರ ದೈವಗಳ ಜೀರ್ಣೋದ್ಧಾರ ಸಮಿತಿ ಪ್ರದಾನ ಕಾರ್ಯದರ್ಶಿ ಭಾಸ್ಕರ ಅಡ್ಕಾರು ಬೀರಮಂಗಲ, ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಬೋಜಪ್ಪ ನಾಯ್ಕ ವಿನೋಬನಗರ, ಚೆನ್ನಕೇಶವ ಜಾಲ್ಸೂರು, ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯ ಗೋಪಾಲ ಕಾನ ಅಡ್ಕಾರು ಉಪಸ್ಥಿತರಿದ್ದರು.
ಫೆ.11ರಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಒಂಭತ್ತು ಮಂದಿ ಸದಸ್ಯರನ್ನು ನೇಮಕಗೊಳಿಸಿ, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಆದೇಶ ಹೊರಡಿಸಲಾಗಿತ್ತು.










