ಇಂದು ದಂಬೆಕೋಡಿ, ಮುಳಿಯ, ಮೊಗ್ರ, ಮೂಲೆತೋಟ ಸೇರಿ ಸಹಕಾರ ಭಾರತಿ 12, ಪಕ್ಷೇತರ ಒಂದು ನಾಮಪತ್ರ

ಗುತ್ತಿಗಾರು ಪ್ರಾ.ಕೃ.ಸ.ಸಂಘದ 12 ಜನರ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು ಫೆ.23 ರಂದು ಮತದಾನ ನಡೆಯಲಿದೆ.
















ಇಂದು ಫೆ.13 ರಂದು ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 12 ಜನ ನಾಮಪತ್ರ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಸಾಮಾನ್ಯ ಕ್ಷೇತ್ರದಿಂದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು, ರವೀಂದ್ರ ಕಾನಾವು ಅಡ್ಡನಪಾರೆ, ಪದ್ಮನಾಭ ಮೀನಾಜೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ, ಹಿಂದುಳಿದ ಬಿ ಕ್ಷೇತ್ರದಿಂದ ವಿನ್ಯಾಸ್ ಕೊಚ್ಚಿ, ಮಹಿಳಾ ಕ್ಷೇತ್ರದಿಂದ ತಿಲಕ ಕೋಲ್ಯ, ವಿನುತಾ ಜಾಕೆ, ಪರಿಶಿಷ್ಟ ಪಂಗಡದಿಂದ ಜನಾರ್ದನ ನಾಯ್ಕ ಅಚ್ರಪ್ಪಾಡಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕುಂಞ ಬಳ್ಳಕ್ಕ ನಾಮಪತ್ರ ಸಲ್ಲಿಸಿದರು. ಪಕ್ಷೇತರರಾಗಿ ಸಾಮಾನ್ಯ ಕ್ಷೇತ್ರಕ್ಕೆ ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸಿದ್ದಾರೆ.

.










