ಸುಳ್ಯ ತಾಲೂಕು ಕೃಷಿಕ ಸಮಾಜದ ಮೊದಲ ಸಭೆಯು ಫೆ.17ರಂದು ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಕುಸುಮಾಧರ. ಎ. ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರಾದ ಚಂದ್ರ ಕೋಲ್ಚಾರ್, ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕೋಶಾಧಿಕಾರಿ ಸವಿನ್ ಕೊಡಪಾಲ, ಕೃಷಿ ಇಲಾಖೆ ಸಹಾಯಕ ಉಪನಿರ್ದೇಶಕರಾದ ಗುರುಪ್ರಸಾದ್, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
















ನಿರ್ಣಯಗಳು :
- ಅಡಿಕೆಗೆ ಎಲೆ ಚುಕ್ಕಿ ರೋಗ ಮತ್ತು ಹಳದಿ ರೋಗದ ಬಗ್ಗೆ ತಾಲೂಕಿನ 3 ಕಡೆ ಮಾಹಿತಿ ಕಾರ್ಯಾಗಾರ ಆಯೋಜನೆ ಮಾಡುವುದು.
- ಮುಂದಿನ ಡಿಸೆಂಬರ್ ಒಳಗಾಗಿ ಕೃಷಿಮೇಳ ಆಯೋಜನೆ.
- ತಾಲೂಕು ಕೃಷಿಕ ಸಮಾಜಕ್ಕೆ ನೂತನ ಕಾರ್ಯಾಲಯ ಮಾಡುವುದು.
- ಕೃಷಿ ಅಧ್ಯಯನ ಪ್ರವಾಸ ಇಟ್ಟುಕೊಳ್ಳುವುದು. ತೋಟಗಾರಿಕಾ ಇಲಾಖೆಯ ಸವಲತ್ತುಗಳ ಬಗ್ಗೆ ಇಲಾಖೆಯ ಅಧಿಕಾರಿಗಳು ತಿಳಿಸಿದರು










