ಕಲ್ಮಕಾರು ಗ್ರಾಮದ ತಿರುಮಲೇಶ್ವರ ದಬ್ಬಡ್ಕ ಎಂಬವರು ವಿಷ ಸೇವಿಸಿ ಮೃತಪಟ್ಟ ಘಟನೆ ಏ. 10 ರಂದು ವರದಿಯಾಗಿದೆ.
ಎರಡು ದಿನಗಳ ಹಿಂದೆ ಕೃಷಿಗಾಗಿ ತಂದ ಕ್ರಿಮಿನಾಶಕ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಸುಳ್ಯ ಕೆ.ವಿ ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.









ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶಶಿಕಲಾ, ಪುತ್ರಿ ಸುಶ್ಮಿತಾ, ಪುತ್ರಿ ಮನ್ವಿತ್ , ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.










