
ಉಬರಡ್ಕ ಮಿತ್ತೂರು ಗ್ರಾಮದ ಅಮೈ – ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಸಮಿತಿ ವತಿಯಿಂದ 46 ನೇ ವಾರ್ಷಿಕ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.10 ಮತ್ತು ಎ.11 ರಂದು ಭಕ್ತಿ,ಸಂಭ್ರಮದಿಂದ ನಡೆಯಿತು.
ಎ.10 ರಂದು ಬೆಳಿಗ್ಗೆ ಗಣಪತಿ ಹವನ,ಸಂಜೆ ಊರವರ ಕೂಡುವಿಕೆ,ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯಲಾಯಿತು.
ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ನಡೆಯಿತು.

ನಂತರ ಕುಲ್ಚಾಟ ನಡೆಯಿತು.
ಎ.11 ರಂದು ಪ್ರಾತ:ಕಾಲ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿಪ್ರವೇಶ ನಡೆಯಿತು.
ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.








ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಸಮಿತಿ ಅಧ್ಯಕ್ಷ ರಾಮಕೃಷ್ಣ ಅಮೈ,ಗೌರವಾಧ್ಯಕ್ಷ ಪಿ.ಶಶಿಧರ ಶೆಟ್ಟಿ , ಕಾರ್ಯದರ್ಶಿ ಪ್ರಭಾಕರ ಅಮೈ, ಖಜಾಂಜಿ ಲಕ್ಷ್ಮಣ ಗೌಡ ಕುದ್ಪಾಜೆ ಮತ್ತು ಆಡಳಿತ ಸಮಿತಿ ಸರ್ವಸದಸ್ಯರು , ಶ್ರೀ ವಿಷ್ಣುಮೂರ್ತಿ ದೈವದ ಉತ್ಸವ ಸಮಿತಿ ಅಧ್ಯಕ್ಷ ರವಿಚಂದ್ರ ಕೊಡಿಯಾಬೈಲು,ಕಾರ್ಯದರ್ಶಿ ಸೂರಜ್ ಕೊಡಿಯಾಲಬೈಲು,ಖಜಾಂಜಿ ಮಧುಕಿರಣ ಕೊಡಿಯಾಲಬೈಲು ಮತ್ತು ಸರ್ವಸದಸ್ಯರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

ಭಜನೆ, ಸಾಂಸ್ಕೃತಿಕ ಸಂಭ್ರಮ
ಎ.10 ರಂದು ರಾತ್ರಿ ಶ್ರೀ ವಿಷ್ಣು ಯುವಕ ಮಂಡಲ ಕೊಡಿಯಾಲಬೈಲು,ಶ್ರೀ ವರಲಕ್ಷ್ಮೀ ಯುವತಿ ಮಂಡಲ ಅಮೈ ಕೊಡಿಯಾಲಬೈಲು ,ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಕುತ್ತನೊಟ್ಟೆ ಇವರಿಂದ ಭಜನೆ ನಡೆಯಿತು.
ನಂತರ ಸಾರ್ವಜನಿಕ ಅನ್ನಪ್ರಸಾದ ವಿತರಣೆ ನಡೆಯಿತು.
ನಂತರ ಸಾಂಸ್ಕೃತಿಕ ಸಂಭ್ರಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು ಮತ್ತು ಅಂಗನವಾಡಿ ಕೇಂದ್ರ ಕೊಡಿಯಾಲಬೈಲು ಇವರಿಂದ ನಡೆಯಿತು.
ಬಳಿಕ ನಿತಿನ್ ಹೊಸಂಗಡಿ ಇವರ ನಿರ್ದೇಶನದಲ್ಲಿ ಶ್ರೀ ದುರ್ಗಾ ಕಲಾ ತಂಡ ಪುಗರ್ತೆ ಕಲಾವಿದೆರ್ ವಿಟ್ಲ ಮೈರ ಕೇಪು ಅಭಿನಯಿಸುವ ಕಲ್ಜಿಗದ ಕಾಳಿ ಮಂತ್ರದೇವತೆ ನಡೆಯಿತು.
ಸಾಂಸ್ಜೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ಮನರಂಜಿಸಿತ್ತು.











