ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದ ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗರಡಿ-ಕಾಚುಕುಜುಂಬ ದೈವಸ್ಥಾನದ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಕಲ್ಮಡ್ಕ ಗ್ರಾಮ ಪಂಚಾಯತ್ ವತಿಯಿಂದ ರೂ. 3 ಲಕ್ಷ ಅನುದಾನ ಮಂಜೂರಾಗಿದ್ದು ಕಾಮಗಾರಿಯ ಗುದ್ದಲಿಪೂಜೆ ಕಾರ್ಯಕ್ರಮವು ಎ.11 ರಂದು ನಡೆಯಿತು.










ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ದೀಪ ಬೆಳಗಿಸಿ,ಗುದ್ದಲಿ ಪೂಜೆ ನೆರವೇರಿಸಿದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಸದಸ್ಯೆ ಶ್ರೀಮತಿ ಜಯಲತಾ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ, ಗುತ್ತಿಗೆದಾರ ಗಣೇಶ್ ಭೀಮಗುಳಿ, ಹೊನ್ನಪ್ಪ ಗರಡಿ,ರವಿ ಗರಡಿ, ಶ್ರೀಮತಿ ಪುಷ್ಪಾ ಡಿ ಪ್ರಸಾದ್ ಕಾನತ್ತೂರ್,ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಊರವರು ಉಪಸ್ಥಿತರಿದ್ದರು.










