*ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ಮಡಪ್ಪಾಡಿಯ ನವೋದಯ ಗುಂಪಿನ ಮಹಿಳಾ ಸದಸ್ಯರಿಗೆ
ಸಮವಸ್ತ್ರವನ್ನು ವಿತರಿಸಲಾಯಿತು.









ಸಂಘದ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು ಸಮವಸ್ತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಚಿನ್ ಬಳ್ಳಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪುಂಬಾಡಿ, ನವೋದಯ ತಾಲೂಕು ಮೇಲ್ವಿಚಾರಕ ಶ್ರೀಧರ ಮಾಣಿಮರ್ಧು, ಪ್ರೇರಕಿ ಅನಿತಾ ತಲೂರು ಹಾಗೂ ಸೊಸೈಟಿ ನಿರ್ದೇಶಕರು, ಸಿಬ್ಬಂದಿಗಳು ಮತ್ತು ನವೋದಯ ಗುಂಪಿನ ಸದಸ್ಯರು ಉಪಸ್ಥಿತರಿದ್ದರು.
ಮೇಲ್ವಿಚಾರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ ಪ್ರಸ್ತಾವನೆಗೈದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪುಂಬಾಡಿ ವಂದಿಸಿದರು.










