
ಸುಬ್ರಹ್ಮಣ್ಯ ಕುಲ್ಕುಂದದ
ಬಸವೇಶ್ವರ ದೇವಸ್ಥಾನ
ವಾರ್ಷಿಕ ಜಾತ್ರೋತ್ಸವ ಏ.19 ರಿಂದ ಆರಂಭಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಏ.20 ರ ರಾತ್ರಿ ಸಂಪನ್ನಗೊಂಡಿತು.
















ಏ.13 ರಂದು ಜಾತ್ರೋತ್ಸವ ಪ್ರಯುಕ್ತ ಮುಹೂರ್ತದ ಗೊನೆ ಕಡಿಯಲಾಯಿತು.
ಏ.19 ರ ಬೆಳಗ್ಗೆ ಹಸಿರು ಕಾಣಿಕೆ
ಸಮರ್ಪಣೆ ನಡೆದು ಜಾತ್ರೋತ್ಸವ ಆರಂಭವಾಯಿತು. ಅಂದು
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಂಜೆ, ಪ್ರಸಾದ ಶುದ್ದಿ, ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆಯಿತು ರಾತ್ರಿ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಯಕ್ಷಗಾನ ಬಯಲಾಟ “ದಕ್ಷಯಜ್ಞ – ಗಿರಿಜಾ ಕಲ್ಯಾಣ” ನಡೆಯಿತು..
ಏ. 20 ರ ಬೆಳಗ್ಗೆ ಗಣಪತಿ ಹವನ, ಕಲಶ ಪೂಜೆ, ಶ್ರೀ ದೇವರಿಗೆ ಬೆಳಗ್ಗಿನ ಮಹಾಪೂಜೆ ಬಳಿಕ ಶತರುದ್ರಾಭಿಷೇಕ ನಡೆದು ಪರಿವಾರ ದೇವರುಗಳಿಗೆ ಕಲಶಾಭಿಷೇಕ, ತಂಬಿಲ ಸೇವೆ ನಡೆಸಿ ಶ್ರೀ ಬಸವೇಶ್ವರ ದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು ನೂತಾರು ಭಕ್ತರು ಉಪಸ್ಥಿತರಿದ್ದರು. ಸಾಯಂಕಾಲ ದೀಪಾರಾಧನೆ, ರಾತ್ರಿ ತಾಯಂಬಕ, ಶ್ರೀ ರಂಗಪೂಜೆ, ಶ್ರೀ ಭೂತ ಬಲಿ, ಪಲ್ಲಕ್ಕಿ ಉತ್ಸವ, ವಸಂತಕಟ್ಟೆಪೂಜೆ, ದರ್ಶನಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆದು, ಮಂತ್ರಾಕ್ಷತೆ , ಅನ್ನ ಸಂತರ್ಪಣೆ ನಡೆದು ಜಾತ್ರೋತ್ಸವ ಸಂಪನ್ನಗೊಂಡಿತು.. ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಅರ್ಚಕರು, ವೈದಿಕ ವೃಂದ, ಉಪ ಸಮಿತಿಯವರು, ಬೈಲುವಾರು ಸಮಿತಿಯವರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.










