ಬೆಳ್ಳಾರೆ- ಪೆರುವಾಜೆ ಡಾ. ಕೆ ಶಿವರಾಮ ಕಾರಂತ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

0

ಬೆಳ್ಳಾರೆ- ಪೆರುವಾಜೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ. 30 ರಂದು ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶದ ಸಹಭಾಗಿತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶಿವಪ್ರಸಾದ್ ಕೆ ಆರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ “ಎಸೆನ್ಸಿಯಲ್ ಸ್ಕಿಲ್ಸ್ ಫಾರ್ ಕಾರ್ಪೊರೇಟ್ ಎಕ್ಸಲೆನ್ಸ್ ” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡರು ಹಾಗೂ ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಅಗತ್ಯ ಕೌಶಲ್ಯಗಳ ಬಗೆಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ ಎಸ್ ರವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ.ರಾಮಚಂದ್ರ ಕೆ, ಉಪನ್ಯಾಸಕರಾದ ರಾಮು ಆರ್, ಕಿರಣ್ ಎ ಎಸ್ ಹಾಗೂ ಶ್ರೀಮತಿ ಯಶೋಧ ಎನ್ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಸ್ನಾತಕ ವಿಭಾಗದ ಸಂಯೋಜಕರಾದ ಶ್ರೀಮತಿ ಶಾಲಿನಿ ಆರ್ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕು. ಸಂಗೀತಪದ್ಮ ಎಸ್ ತೃತೀಯ ಬಿ.ಕಾಮ್. ಇವರು ಸ್ವಾಗತಿಸಿ, ಶ್ಯಾಮ್ ಗಣೇಶ್ ಭಟ್, ಪ್ರಥಮ ಬಿ. ಕಾಮ್. ಇವರು ವಂದನಾರ್ಪಣೆಗೈದರು. ಪ್ರಿಯಾಂಕ ಎಸ್, ತೃತೀಯ ಬಿ.ಕಾಮ್. ಇವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ವಿಶಾಖ ಎ, ತೃತೀಯ ಬಿ. ಕಾಮ್. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.