ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರಿಂದ ಉದ್ಘಾಟನಾ ಕಾರ್ಯಕ್ರಮಗಳ ಪೂರ್ವ ಸಿದ್ಧತೆಗಳ ಪರಾಮರ್ಶೆ

ನಾಳೆ ಜೂ. 18ರಂದು ರಾಜ್ಯದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿರುವ ನೂತನ ಕಛೇರಿಗಳಿಗೆ ಮತ್ತು ಪ್ರಮುಖ ಅಧಿಕಾರಿಗಳೊಂದಿಗೆ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಉದ್ಘಾಟನೆ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.
















ಸುಳ್ಯದ ಅರಂಬೂರಿನಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ನೂತನ ಕಛೇರಿ ಮತ್ತು ನಗರ ಪಂಚಾಯತ್ ನಲ್ಲಿ ಉದ್ಘಾಟನೆಗೊಳ್ಳಲಿರುವ ಸುಳ್ಯ ನಗರ ಯೋಜನಾ ಪ್ರಾಧಿಕಾರದ ನೂತನ ಕಛೇರಿಗೆ ಭೇಟಿ ನೀಡಿ ಉದ್ಘಾಟನಾ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಯಿತು.
ಉದ್ಘಾಟನಾ ಕಾರ್ಯಕ್ರಮಗಳ ನಂತರ ನಗರ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವ ಕಾರ್ಯಕ್ರಮ ನಡೆಯಲಿದ್ದು ಈ ಕುರಿತು ರೂಪುರೇಷೆ ಸಿದ್ದಪಡಿಸಲು ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಭವಾನಿಶಂಕರ್ ಕಲ್ಮಡ್ಕ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೋಕುಲ್ ದಾಸ್ ಸುಳ್ಯ, ರವಿಕುಮಾರ್ ಕಿರಿಭಾಗ, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯ ಕುಮಾರ್ ಆಡಿಂಜ ಮೊದಲಾದವರು ಉಪಸ್ಥಿತರಿದ್ದರು.










