ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಯಶಸ್ ರೈ ಬಿ.ಎಲ್. ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ವಿಶೇಷ ರಾಯಭಾರಿಯಾಗಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಮೂಲಕ ಆಯ್ಕೆಯಾಗಿರುತ್ತಾರೆ.















ಇವರು ಕೊಡಗು ಜಿಲ್ಲೆಯ ಮೂರ್ನಾಡು ಕೊಡಂಬುರುವಿನ ಬಿ.ಎನ್. ಲವ ಕುಮಾರ್ ಮತ್ತು ಶ್ರೀಮತಿ ಜಯಂತಿ ಬಿ.ಬಿ. ಅವರ ದ್ವಿತೀಯ ಪುತ್ರರಾಗಿರುತ್ತಾರೆ. ಇವರನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ) ಸುಳ್ಯ, ಡಾ. ಜ್ಯೋತಿ ಆರ್. ಪ್ರಸಾದ್ ಕಾರ್ಯದರ್ಶಿ, ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ, ಡಾ. ಅಭಿಜ್ಞ ಕೆ., ನಿರ್ದೇಶಕರು, ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ, ಮೌರ್ಯ ಆರ್. ಕುರುಂಜಿ, ಎಕ್ಸೆಕ್ಯುಟಿವ್ ಡೈರೆಕ್ಟರ್, ಕೆವಿಜಿಡಿಸಿ&ಹೆಚ್, ಸುಳ್ಯ, ಡಾ. ಉಜ್ವಲ್ ಯು.ಜೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ಪ್ರಾಂಶುಪಾಲ ಡಾ. ಸುರೇಶ ವಿ. ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಮತ್ತು ಸಿಬ್ಬಂಧಿ ವರ್ಗದವರು ಅಭಿನಂದಿಸಿರುತ್ತಾರೆ.










