ಪಂಜ: ಶ್ರೀ ಕಾಚುಕುಜುಂಬ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

0

ಅಧ್ಯಕ್ಷ: ಪರಮೇಶ್ವರ ಬಿಳಿಮಲೆ,ಉಪಾಧ್ಯಕ್ಷ: ಉಮೇಶ್ ಬುಡೆಂಗಿ, ಕಾರ್ಯದರ್ಶಿ: ಆನಂದ ಗೌಡ ಜಳಕದಹೊಳೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲಗೈಬಂಟ ಶ್ರೀ ಕಾಚು ಕುಜುಂಬ ದೈವದ ಮೂಲ ಸ್ಥಾನ ಗರಡಿ ಬೈಲ್ ನಲ್ಲಿ ನೂತನವಾಗಿ ನಿರ್ಮಾಣ ವಾಗುತಿರುವ ಶ್ರೀ ಕಾಚು ಕುಜುಂಬ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಪರಮೇಶ್ವರ ಗೌಡ ಬಿಳಿಮಲೆ, ಉಪಾಧ್ಯಕ್ಷರಾಗಿ ಉಮೇಶ್ ಬುಡೆಂಗಿ ಬಳ್ಪ ಕಾರ್ಯದರ್ಶಿಗಳಾಗಿ ಆನಂದ ಗೌಡ ಜಳಕದಹೊಳೆ ಆಯ್ಕೆಯಾದರು.


ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಸಭಾಧ್ಯಕ್ಷತೆ ವಹಿಸಿದ್ಧರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್, ಮಾಲಪ್ಪ ಗೌಡ ಪಟ್ಟೆ ಎಣ್ಮೂರು , ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕಡ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಸತ್ಯನಾರಾಯಣ ಭಟ್ ಕಾಯಂಬಾಡಿ, ಶ್ರೀಮತಿ ಮಾಲಿನಿ ಕುದ್ವ ಹಾಗೂ ಶ್ರೀಮತಿ ಪವಿತ್ರ ಮಲ್ಲೆಟ್ಟಿ ಉಪಸ್ಥಿತರಿದ್ದರು.ನೂತನ ದೈವಸ್ಥಾನದ ನಿರ್ಮಾಣ ಕೆಲಸ ಈಗಾಗಲೇ ಪ್ರಾರಂಭ ಗೊಂಡಿದ್ದು ಪ್ರತಿಷ್ಟಾ ಕಾರ್ಯಕ್ರಮವು ದಿನಾಂಕ 3-12-25 ರಿಂದ ಆರಂಭವಾಗಿ 5-12-25 ತನಕ ನಡೆಯಲಿದೆ. ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.