ಐಐಎಸ್‌ಇಆ‌ರ ಪರೀಕ್ಷಾ ಫಲಿತಾಂಶ – ಶ್ರೇಯಾನ್ ಕಾವಿನಮೂಲೆಯವರಿಗೆ ಆಲ್ ಇಂಡಿಯಾ ಕೆಟಗರಿಯಲ್ಲಿ 150ನೇ ರ್‍ಯಾಂಕ್

0

ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ
ಅಧೀನದಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಷನ್ ಆ್ಯಂಡ್ ರಿಸರ್ಚ್ (ಐಐಎಸ್‌ಇಆರ್ ) ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರು ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರೇಯಾನ್ ಕಾವಿನಮೂಲೆಯವರಿಗೆ 2725ನೇ ರ್ಯಾಂಕ್ ಹಾಗೂ ಆಲ್ ಇಂಡಿಯಾ ಕೆಟಗರಿಯಲ್ಲಿ 150ನೇ ರ್‍ಯಾಂಕ್ ಲಭಿಸಿದೆ.
ಅಖಿಲ ಭಾರತ ಮಟ್ಟದಲ್ಲಿ ಜನರಲ್ ಕೆಟಗರಿ ವಿಭಾಗದಲ್ಲಿ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆಗಳನ್ನು ಸಂಯೋಜಿಸಲು ಮತ್ತು ಉತ್ತೇಜಿಸಲು ಭಾರತ ಸರಕಾರ ಬೆರ್ಹಾಂಪುರ, ಭೋಪಾಲ್, ಕೋಲ್ಕೊತಾ, ಮೊಹಾಲಿ, ಪುಣೆ, ತಿರುವನಂತಪುರಂ ಮತ್ತು ತಿರುಪತಿಗಳಲ್ಲಿ ಐಐಎಸ್‌ಇಆ‌ರ್ ಗಳನ್ನು ಸ್ಥಾಪಿಸಿದೆ. ವಿಜ್ಞಾನ ವಿಷಯದ ಶಿಕ್ಷಣ ಹಾಗೂ ಸಂಶೋಧನೆಯಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಈ ಸಂಸ್ಥೆಗಳ ಪ್ರವೇಶಕ್ಕೆ ಈ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ. ವಿಜ್ಞಾನದಲ್ಲಿ ಸಂಶೋಧನೆ
ಮೂಲಕ ಸಾಮಾಜಿಕ ಸಮಸ್ಯೆಗಳಿಗೆ ಸುಸ್ಥಿರ ಪರಿಹಾರಗಳನ್ನು ಆವಿಷ್ಕರಿಸುವ ಮತ್ತು ಅನುಷ್ಠಾನಗೊಳಿಸುವ ಮೂಲಕ ರಾಷ್ಟ್ರವನ್ನು ರೂಪಿಸಲು
ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುವುದು ಐಐಎಸ್‌ಇಆ‌ರ್ ನ ಪ್ರಮುಖ ಗುರಿಯಾಗಿದೆ. ಅಲ್ಪಾವಧಿಯಲ್ಲಿಯೇ ಐಐಎಸ್
ಇಆರ್‌ನ ಹಲವು ಸಂಶೋಧನೆಗಳು ಪ್ರಕಟಗೊಂಡಿದ್ದು,
ಪೇಟೆಂಟ್‌ಗಳ ರೂಪದಲ್ಲಿ
ಬೌದ್ಧಿಕ ಆಸ್ತಿಯನ್ನು ಸೃಷ್ಟಿಸಿವೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುವ ಶ್ರೇಯಾನ್ ಕಾವಿನಮೂಲೆಯವರು ಬಾಳಿಲ ಗ್ರಾಮದ ಪ್ರಶಾಂತ್ ಕಾವಿನಮೂಲೆ ಮತ್ತು ಶ್ರೀಮತಿ ಜಯಗೌರಿ ದಂಪತಿಯ ಪುತ್ರ.