ಕಸಾಪ ಸುಳ್ಯ ಹೋಬಳಿ ಘಟಕದಿಂದ ಕೊಯಿಕುಳಿ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ

0

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ನಾಲ್ಕನೇ ಕಾರ್ಯಕ್ರಮವು ದುಗಲಡ್ಕದ ಕೊಯ್ಕುಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 5 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾವನಾ ಸಂಗೀತ ಶಾಲೆಯ ಸಂಚಾಲಕರಾದ ಕೆ.ಆರ್. ಗೋಪಾಲಕೃಷ್ಣ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿರುವ ಶ್ರೀಮತಿ ಮಮತಾ ಇವರು ಭಾಗವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ತಾರನಾಥ ಇವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.


ಕಸಾಪ ಸುಳ್ಯ ಹೋಬಳಿ ಘಟಕದ ಸಂಘಟನಾ ಕಾರ್ಯದರ್ಶಿ ಭಾಗೀಶ್ ಕೆ.ಟಿ ಹಾಗೂ ಶಾಲಾ ಶಿಕ್ಷಕ ಪ್ರಭಾಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಪಲ್ಲವಿ ಪಿ ಇವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮಿಶ್ರಿಯಾ ವಂದಿಸಿದರು. ಶಿಕ್ಷಕಿ ಶ್ರೀಮತಿ ಯೋಗಶ್ರೀ ಸಹಕರಿಸಿದರು. ಸುಮಾರು ಒಂದೂವರೆ ಗಂಟೆಯ ಕಾಲ ನಡೆಸಿದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗಾಗಿ ಹಾಡುಗಳನ್ನು ಹಾಡಿ, ಕತೆಯನ್ನು ಹೇಳಿ ಮನೋಲ್ಲಾಸವನ್ನು ನೀಡಿದ್ದು ಮಕ್ಕಳು ಇದರಲ್ಲಿ ಸಂಪೂರ್ಣ ತೊಡಗಿ ಆನಂದಿಸಿದರು.


ಕಸಾಪ ಸುಳ್ಯ ಹೋಬಳಿ ಘಟಕವು ತನ್ನ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಈ ಕಾರ್ಯಕ್ರಮವನ್ನು ಯೋಜಿಸಿದ್ದು ಪ್ರತೀ ಶನಿವಾರ ಆಯ್ದ ಶಾಲೆಯಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದು, ಈ ಮೊದಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಟಾರು ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದೆ.