ಮಕ್ಕಳು ಬಾಲ್ಯದಲ್ಲೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾಮಾತಾ ತರಬೇತಿ ಸಂಸ್ಥೆ ದಾರಿ ದೀಪವಾಗಿದೆ: ಶ್ರೀಮತಿ ಸ್ವರ್ಣಕಲಾ ಎ. ಎಸ್
ಭವಿಷ್ಯದ ಅಧಿಕಾರಿಗಳನ್ನು ಚಿಕ್ಕಂದಿನಲ್ಲೇ ತಯಾರಿ ಮಾಡಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ: ಭಾಗ್ಯೇಶ್ ರೈ
ಕಳೆದ ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ ಹಲವಾರು ಸರಕಾರಿ ನೇಮಕಾತಿಗಳಲ್ಲಿ ನೇಮಕಗೋಳ್ಳುವಂತೆ ಮಾಡಿದ ಕೀರ್ತಿಯನ್ನು ಹೊತ್ತು ಮುನ್ನಡೆಯುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳು ಪ್ರಾರಂಭಗೊಂಡವು.









ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಿದ ಆಹ್ವಾನಿತಾರಾಗಿದ್ದ ಶಾರದಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ. ಎಸ್ ರವರು ಮಾತನಾಡಿ “ಸ್ಥಳೀಯ ಮಟ್ಟದಲ್ಲಿ ಚಿಕ್ಕ ವಯಸ್ಸಿನ ಮಕ್ಕಳಿಗೆ ಪೂರಕವಾದ ತರಬೇತಿ ನೀಡಿ ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿರುವ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದ್ದು ನಾವೆಲ್ಲರೂ ವಿದ್ಯಾಮಾತಾ ಅಕಾಡೆಮಿಯ ಕಾರ್ಯಕ್ಕೆ ಕೈ ಜೋಡಿಸಬೇಕು” ಎಂದು ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ” “ಮಕ್ಕಳು ದಾರಿ ತಪ್ಪುವ ಈ ಕಾಲಘಟ್ಟದಲ್ಲಿ ಬಾಲ್ಯದಲ್ಲೇ ಭವಿಷ್ಯದ ಕನಸನ್ನು ಬಿತ್ತಿ ಉನ್ನತವಾದ ಸ್ಥಾನಮಾನವನ್ನು ಹೊಂದಲು ನವೋದಯ, ಸೈನಿಕದಂತಹ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಮಕ್ಕಳಲ್ಲಿ ಅರಿವು ಮೂಡಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ನಮಗೆ ಅತೀವ ಸಂತಸದ ಸಂಗತಿ ಇದು ಇನ್ನಷ್ಟು ಯೋಜನೆಗಳಿಗೆ ಆದರ್ಶವಾಗಿದ್ದು,ವಿದ್ಯಾರ್ಥಿಗಳಿಗೂ ಇನ್ನಷ್ಟು ಇದರ ಅರಿವನ್ನು ಹೆಚ್ಚಿಸಲಿದೆ” ಎಂದು ವಿದ್ಯಾಮಾತಾ ಅಕಾಡೆಮಿಯಲ್ಲಿರುವ ವಿವಿಧ ರೀತಿಯ ತರಬೇತಿಗಳ ಕುರಿತು ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮವನ್ನು ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ರವರು ನಿರೂಪಿಸಿದರು, ತರಬೇತುದರರಾದ ದೀಪ್ತಿ, ಮೇಘನಾ ಗೌಡ, ಯಶಸ್ವಿ ಹಾಗೂ ಸಿಬ್ಬಂದಿ ಮಿಥುನ್ ರೈ ರವರು ಸಹಕರಿಸಿದರು ಕಾರ್ಯಕ್ರಮದಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.










