ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ನಾಯ್ಕ ರವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ (ಎ ಎಸ್ ಐ) ಆಗಿ ಪದೋನ್ಮತಿ ಹೊಂದಿ ಜು. 16 ರಂದು ಸುಳ್ಯ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
















ಇವರು ಮೂಲತಹ ಬೆಳ್ತಂಗಡಿ ತಾಲೂಕಿನ ಕಾಣಿಯೂರು ಗ್ರಾಮ ನಿವಾಸಿ ತನಿಯಪ್ಪ ನಾಯ್ಕ್ ಹಾಗೂ ವಸಂತಿ ದಂಪತಿಯ ವರ ಪುತ್ರರಾಗಿದ್ದು 1996 ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆ ಗೊಂಡರು. ಇವರು ಶಂಕರ ನಾರಾಯಣ ಠಾಣೆ, ವೇಣೂರು, ಬೆಳ್ತಂಗಡಿ, ಉಪ್ಪಿನಂಗಡಿ, ಸುಭ್ರಹ್ಮಣ್ಯ, ಪುತ್ತೂರು ಮುಂತಾದ ಕಡೆ ಗಳಲ್ಲಿ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದಿಂದ ಸುಳ್ಯ ವೃತ್ತ ನಿರೀಕ್ಷಕರ ಠಾಣೆಗೆ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯಕ್ಕೆ ಬಂದಿದ್ದರು.










