ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ಜಾಗೃತಿಯಾನ- ಪರಿಸರ ಗೀತೆ ಗಾಯನ ಹಾಗೂ ಔಷಧ ಸಸ್ಯಗಳ ಬಗ್ಗೆ ಸ್ಪರ್ಧೆ

0

ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಕಾಲೇಜಿನ ಸಹಯೋಗದಲ್ಲಿ ನಡೆದ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ಜು.16 ರಂದು ನಡೆಯಿತು.

ಸಭಾಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಪ್ರಗತಿಪರ ಕೃಷಿಕ ಯಶೋಚಂದ್ರ ಪರಮಲೆ ಉಪನ್ಯಾಸ ನೀಡಿದರು.
ವೇದಿಕೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ತೇಜಸ್ವಿ ಕಡಪಳ, ಕಾರ್ಯ ಕ್ರಮ ಸಂಯೋಜಕರಾದ ಯೋಗಿಶ್ ಹೊಸೊಳಿಕೆ, ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಪೂರ್ಣಿಮಾ.ಯಂ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೇಶವ ಗೌಡ ಕಾಂತಿಲ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿಶ್ವನಾಥ.ಸಾಲ್ತಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಯಶೋಚಂದ್ರ ಪರಮಲೆ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧ್ಯಾಭೋಧಿನಿ ಬಾಳಿಲ ಇದರ ನಿವೃತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ, ಬಿಳಿನೆಲೆ ಪ್ರೌಢಶಾಲಾ ನಿವೃತ್ತ ಹಿಂದಿ ಶಿಕ್ಷಕರಾದ ದುಗ್ಗಪ್ಪ ಕುಳ್ಳಂಪ್ಪಾಡಿ, ಪದವಿ ಪೂರ್ವ ಕಾಲೇಜು ಪಂಜ ಇದರ ನಿವೃತ್ತ ಪ್ರಾಂಶುಪಾಲರಾದ ವೆಂಕಪ್ಪ ಕೇನಾಜೆ, ಸಿ.ಆರ್.ಪಿ.ಕುಶಾಲಪ್ಪ ತುಂಬ್ಬಾತ್ತಜೆ .ನಿವೃತ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ಉಪಸ್ಥಿತರಿದ್ದರು.


ಭಾವನ ಸುಗಮ ಸಂಗೀತ ಬಳಗದ ಶ್ರೀ. ಕೆ. ಆರ್. ಗೋಪಾಲಕೃಷ್ಣ ಹಾಗೂ ಗಾಯಕಿ ಕು. ಲಿಪಿಶ್ರೀ ಇವರಿಂದ ಪರಿಸರ ಗೀತಾ ಗಾಯನ ಕಾರ್ಯಕ್ರಮ ನಡೆಯಿತು. ಅಂತೆಯೇ ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಸ್ವಾಗತಿಸಿ, ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ ವಂದಿಸಿದರು. ಉಪನ್ಯಾಸಕರಾದ ರಂಜಿತ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು.