ಕಲೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾದ ಕು.ಹರ್ಷಿತಾರಿಗೆ ಪುರಸ್ಕಾರ

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ( ರಿ) ಇವರ ಸಹಯೋಗದಲ್ಲಿ 2023 ಮತ್ತು 2024ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪ್ರೆಸ್ಟೀಜ್ ಪದವಿ ಪೂರ್ವ ಕಾಲೇಜು, ಜಪ್ಪಿನಮೊಗರು, ಮಂಗಳೂರು ಇಲ್ಲಿ ನಡೆಯಿತು. ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು 2023 ಮತ್ತು 2024ರಲ್ಲಿ ಶೇಕಡ 100 ಫಲಿತಾಂಶವನ್ನು ಪಡೆದಿದ್ದು ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲಾ .ಎ .ಎಸ್ ರವರು ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ ರವರಿಂದ ಅಭಿನಂದನಾ ಫಲಕವನ್ನು ಸ್ವೀಕರಿಸಿದರು.

2025 ರ ವಾರ್ಷಿಕ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕಲಾವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಹರ್ಷಿತಾ ರವರನ್ನು ಇದೇ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಯಿತು.



















