ಗ್ರಾಮಸ್ಥರಿಂದ ಶಾಸಕರು ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಂವಾದ
ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಆನೆ ಹಾಗೂ ಇತರ ಕಾಡುಪ್ರಾಣಿಗಳ ಉಪಟಳದ ಬಗ್ಗೆ ಗ್ರಾಮಸ್ಥರಿಂದ ಶಾಸಕರು ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಉಬರಡ್ಕಮಿತ್ತೂರು ಪ್ರಾಥಮಿಕ ಸಹಕಾರಿ ಸಂಘದ ಕಟ್ಟಡದ ಸಹಕಾರಿ ಸಿರಿ ಸೌಧದಲ್ಲಿ ಜು.21 ರಂದು ನಡೆಯಿತು.















ಕೃಷಿಕರು ತಮ್ಮ ಕೃಷಿಯು ಆನೆ ಹಾಗೂ ಇತರ ವನ್ಯ ಪ್ರಾಣಿಗಳ ಉಪಟಳದಿಂದ ಹಾನಿಯಾಗಿರುವ ಬಗ್ಗೆ ವಿವರಿಸಿದರು.

ಇದಕ್ಕೆ ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದರು.
ಶಾಸಕಿ ಭಾಗೀರಥಿ ಮುರುಳ್ಯರವರು ಈಗಾಗಲೇ ಮೂರು ಬಾರಿ ಅರಣ್ಯ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಸೋಲಾರ್ ಬೇಲಿ ನಿರ್ಮಾಣಕ್ಕೆ ಈಗಾಗಲೇ ನೀಡುತ್ತಿರುವ ಸಬ್ಸಿಡಿ ಮೊತ್ತವನ್ನು ಶೇ.90% ಕ್ಕೆ ಏರಿಸಬೇಕೆಂದು ಮನವಿ ಸಲ್ಲಿಸಲಾಗಿದೆ. ಹಾನಿಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ ಆನೆ ದಾಳಿ ತಡೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ಸಚಿವರು ಸ್ಪಂದಿಸುವ ಭರವಸೆ ಇದೆ ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಗ್ರಾಮಪಂಚಾಯತ್ ಮತ್ತು ಉಬರಡ್ಕ ಮಿತ್ತೂರು ಸೊಸೈಟಿ ಯಿಂದ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ವಲಯ ಎಸಿಎಫ್ ಪ್ರಶಾಂತ್ ಕುಮಾರ್ ಪೈ, ವಲಯ ಅರಣ್ಯಾಧಿಕಾರಿ ಎನ್ ಮಂಜುನಾಥ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ, ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಚಿತ್ರಾಕುಮಾರಿ, ಸದಸ್ಯರುಗಳಾದ ಪ್ರಶಾಂತ್ ಪಾನತ್ತಿಲ, ಸಂದೀಪ್ ಕುತ್ತಮೊಟ್ಟೆ, ಜಿ.ಪಂ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ, ಕೃಷಿಕರು, ಪಂಚಾಯತ್ ಹಾಗೂ ಸಹಕಾರಿಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.










