ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0

ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ ಜು. 29 ರಂದು ನಡೆಯಿತು.

ಶ್ರೀ ನಾಗದೇವರಿಗೆ ಹಾಲು ,ಸಿಯಾಳ ಅಭಿಷೇಕ ನಡೆಯಿತು.


ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಭಕ್ತಾದಿಗಳು ನಾಗದೇವರಿಗೆ ಹಾಲು,ಸಿಯಾಳ ಸಮರ್ಪಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀವರ ಪಾಂಗಣ್ಣಾಯರವರು ಪೂಜಾಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಸಮಿತಿ ಸದಸ್ಯರು, ಮೊಕ್ತೆಸರ ಗುರುರಾಜ್ ಭಟ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.