














ತೋಟದಲ್ಲಿದ್ದ ವೇಳೆ ಕಾಡುಕೋಣ ಗುದ್ದಿ ರವಿಶಂಕರ ಭಟ್ರವರು ಗಂಭೀರ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ನಂಗಾರು ಎಂಬಲ್ಲಿ ಇದೀಗ ಸಂಭವಿಸಿದೆ.
ಜಾಲ್ಸೂರಿನ ನಂಗಾರು ರವಿಶಂಕರ ಭಟ್ರವರು ತನ್ನ ಮನೆಯ ತೋಟದಲ್ಲಿರುವಾಗ ಘಟನೆ ಸಂಭವಿಸಿದ್ದು, ತೀವ್ರ ಗಾಯಗೊಂಡಿರುವ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.










