ಬಸ್ಸನ್ನೇ ಕೆವಿಜಿ ಆಸ್ಪತ್ರೆಗೆ ತಂದ ಚಾಲಕ
ಮಂಗಳೂರಿನಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆ ಎಸ್ ಅರ್ ಟಿ ಸಿ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೋರ್ವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ಬಸ್ ಚಾಲಕ ಕೆಎಸ್ಆರ್ಟಿಸಿ ಬಸ್ಸನ್ನೇ ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದ ಘಟನೆ ಇದೀಗ ವರದಿಯಾಗಿದೆ.















ಮೈಸೂರು ಮೂಲದ ಶೋಭಾ ಎಂಬ ಮಹಿಳೆಗೆ ಬಸ್ಸು ಸುಳ್ಯ ಬರುತ್ತಿದ್ದಂತೆ ಬಸ್ಸಿನಲ್ಲಿ ನಿರಂತರ ವಾಂತಿ ಮಾಡುವ ಮೂಲಕ ಪ್ರಜ್ಞೆ ತಪ್ಪುವ ಸ್ಥಿತಿಗೆ ಬಂದಿದ್ದರು ಎನ್ನಲಾಗಿದೆ.ಇದನ್ನು ಗಮನಿಸಿದ ಬಸ್ಸು ಚಾಲಕ ಸೀದಾ ಬಸ್ಸನ್ನೇ ಕೆವಿಜಿ ಆಸ್ಪತ್ರೆಗೆ ತಂದು ಅವರನ್ನು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಕೂಡಲೇ ಆಸ್ಪತ್ರೆಯ ಸಿಬ್ಬಂದಿಗಳು ಅವರನ್ನು ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದು ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎನ್ನಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕರ ಈ ಸೇವೆಗೆ ಪ್ರಶಂಸೆ ವ್ಯಕ್ತವಾಗಿದೆ.










