ಸುಳ್ಯ ತಾಲೂಕು ಮಟ್ಟದ 14 ರ ವಯೋಮಾನದ ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಸ. ಮಾ. ಹಿ. ಪ್ರಾ. ಶಾಲೆ, ಸುಳ್ಯದ ಆಯೋಜನೆಯಲ್ಲಿ ಅಮೃತಭವನದಲ್ಲಿ ಆ. 7 ರಂದು ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ರವರು ನೆರವೇರಿಸಿದರು.








ಸಭಾಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರವಿರಾಜ ಅಡ್ಕಾರ್ ವಹಿಸಿದ್ದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ, ನಿವೃತ ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ಶೆಟ್ಟಿ, ಮುಖ್ಯ ಶಿಕ್ಷಕಿ ಸುನಂದ ಶೆಟ್ಟಿ ಉಪಸ್ಥಿತರಿದ್ದರು.
ತಾಲೂಕಿನ ಬಾಲಕ ಬಾಲಕಿಯರ ಸುಮಾರು 25 ತಂಡಗಳು ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನದ ಪ್ರಾಯೋಜಕರಾಗಿ ಸಿಲ್ವಿನ್ ರಾಜ್ ಮತ್ತು ರಂಗನಾಥ ಸಹಕರಿಸಿದರು. ಮುಖ್ಯ ಶಿಕ್ಷಕಿ ಸುನಂದಾ ಸ್ವಾಗತಿಸಿ, ಶಿಕ್ಷಕಿ ಹೇಮಲತಾ ವಂದಿಸಿದರು. ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರ ಸಹಕಾರದೊಂದಿಗೆ ಊಟ ಉಪಾಹಾರದ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸಲಾಯಿತು.










