ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೃಷ್ಣಾಷ್ಟಮಿ ಹಬ್ಬದ ಪ್ರಯುಕ್ತ ಶಾಂತಿ ಸಭೆ

0

ಇಲಾಖಾ ನಿಯಮಗಳನ್ನು ಪಾಲಿಸಿಕೊಂಡು ಹಬ್ಬ ಆಚರಿಸಿ – ಎಸ್.ಐ.ಈರಯ್ಯ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮುಂಬರುವ ಕೃಷ್ಣಾಷ್ಟಮಿ ಹಬ್ಬದ ಪ್ರಯುಕ್ತ ಶಾಂತಿ ಸಭೆಯು ಆ.13 ರಂದು ನಡೆಯಿತು.
ಪೊಲೀಸ್ ಠಾಣಾ ವ್ಯಾಪ್ತಿಯ ಧಾರ್ಮಿಕ ಮುಖಂಡರು ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಠಾಣಾ ಎಸ್.ಐ.ಈರಯ್ಯ ದೂಂತೂರುರವರು ಸ್ವಾಗತಿಸಿ ಬಳಿಕ ಮಾತನಾಡಿ ಮುಂಬರುವ ಕೃಷ್ಣಾಷ್ಟಮಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ, ಇಲಾಖಾ ಮಾಹಿತಿಗಳನ್ನು ಪಾಲಿಸಿಕೊಂಡು ಆಚರಿಸಬೇಕೆಂದು ಹೇಳಿದರು.ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತೆನ್ನು ಅನುಸರಿಸಿಕೊಂಡು ಆಚರಿಸಬೇಕು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೆರವಣಿಗೆಗಳನ್ನು ನಡೆಸಬೇಕು.
ರಾತ್ರಿ ಗಂಟೆ 10.00 ಗಂಟೆವರೆಗೆ ಮಾತ್ರ ಸಭೆ ,ಸಮಾರಂಭ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬಹುದು.
ಧ್ವನಿವರ್ಧಕ ಬಳಸುವಾಗ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಿದರು.