ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯೆ ಡಾ| ಅನುರಾಧ ಕುರುಂಜಿಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾ ಸಂಗಮದ ಗೌರವ ಸಲಹೆಗಾರ ಚಂದ್ರಶೇಖರ ಬಿಳಿನಲೆಯವರು ಸಭೆಯ ಅಧ್ಯಕ್ಷ ಸ್ಥಾನ ವಹಿಸಿದ್ದರು. ಅತಿಥಿಗಳಾಗಿ ಗೌರವ ಸಲಹೆಗಾರ ಫಾಲಚಂದ್ರ ವೈ.ವಿ, ಅಂಗನವಾಡಿ ಶಿಕ್ಷಕಿ ಚಂದ್ರಾವತಿ, ಅಂಗನವಾಡಿ ಸಹಾಯಕಿ ಸುಲೋಚನ, ಚೇತನ್ ಸಿ, ಕೆ.ವಿ.ಜಿ ಪಾಲಿಟೆಕ್ನಿಕ್ ಸ್ವಯಂಸೇವಕರು ಉಪಸ್ಥಿತರಿದ್ದರು.

ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸಂಘದ ಖಜಾಂಚಿ ಹೇಮಾನಾಥ್ ವಂದಿಸಿದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.