ಶೋಷಿತ ಸಮಾಜಕ್ಕೆ ನ್ಯಾಯ ನೀಡಿದವರು ದೇವರಾಜ ಅರಸರು : ವೆಂಕಪ್ಪ ಗೌಡ
ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 110 ನೇ ಜನ್ಮದಿನಾಚರಣೆ ಸಮಾರಂಭ ಆ.28ರಂದು ಸುಳ್ಯ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.
ಸುಳ್ಯನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ ನೀರಬಿದಿರೆ ಅಧ್ಯಕ್ಷತೆ ವಹಿಸಿ, ಉದ್ಘಾಟನೆ ನೆರವೇರಿಸಿದರು.
ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಎಂ.ವೆಂಕಪ್ಪ ಗೌಡರು ದೇವರಾಜ ಅರಸರ ಕುರಿತು ಮಾತನಾಡಿದರು. ಸಮಾಜದಲ್ಲಿ ಶೋಷಿತರಾಗಿದ್ದವರ ಧ್ವನಿಯಾಗಿ, ಅವರ ಕಲ್ಯಾಣಕ್ಕಾಗಿ ದುಡಿದವರು ದೇವರಾಜ ಅರಸರು. ಹಳ್ಳಿಭಾಗದ ಮಕ್ಕಳು ಪೇಟೆಗೆ ಹೋಗಿ ವಿದ್ಯಾಭ್ಯಾಸ ಕಲಿಯುವುದು ಕಷ್ಟವಿದ್ದ ಸಂದರ್ಭ ವಸತಿ ನಿಲಯಗಳನ್ನು ಸ್ಥಾಪಿಸಿ ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಧೀಮಂತ. ಅವರ ಸ್ಮರಣೆ ನಿರಂತರವಾಗಬೇಕು” ಎಂದು ಹೇಳಿದರು.















ತಾಲೂಕು ತಹಶೀಲ್ದಾರ್ ಮಂಜುಳಾ, ಸುಳ್ಯ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,, ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಕಿಶೋರಿ ಶೇಟ್, ನ.ಪಂ. ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕಿರಿ, ನಾಮನಿರ್ದೇಶನ ಸದಸ್ಯ ರಾಜು ಪಂಡಿತ್, ಉಬರಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ನಿತಿನ್ ಪ್ರಭು, ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ನಿವೃತ್ತ ಕಲ್ಯಾಣಾಧಿಕಾರಿ ಮಹಾಲಕ್ಷ್ಮಿ ಬೋಳಾರ್ ವೇದಿಕೆಯಲ್ಲಿ ಇದ್ದರು.
ಸುಳ್ಯದಲ್ಲಿ ವಾರ್ಡನ್ ಆಗಿ ಕೆಲಸ ಮಾಡಿ ಸುಳ್ಯದಿಂದ ವರ್ಗಾವಣೆಗೊಂಡು, ಪ್ರಸ್ತುತ ಪೋಲೀಸ್ ಸಬ್ ಇನ್ ಸ್ಪೆಕ್ಟರ್ ಆಗಿ ಆಯ್ಕೆಯಾಗಿರುವ ಸದ್ದಾಂ ರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಪಿಯುಸಿ, ಎಸ್.ಎಸ್.ಎಲ್.ಸಿ.ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಶ್ರೀಮತಿ ಗೀತಾ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ದೀಪಿಕಾ ಹಾಗೂ ಗೀತಾ ಕಾರ್ಯಕ್ರಮ ನಿರೂಪಿಸಿದರು.










