ಪಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲೆ, ಕೇರಂ , ಚೆನ್ನೆಮಣೆ, ಕಸದಿಂದ ರಸ ಸ್ಪರ್ಧೆ ಉದ್ಘಾಟನೆ

0

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ-2025 ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.27 ರಿಂದ ಆ.29 ತನಕ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿದೆ.


ಆ ಪ್ರಯುಕ್ತ ಆ.24.ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಿತ್ರಕಲಾ ಮತ್ತು ಕಸದಿಂದ ರಸ -ಸ್ಪರ್ಧೆ ,ಕೇರಂ ಮತ್ತು ಚೆನ್ನೆಮಣೆ -ಸ್ಪರ್ಧೆ ನಡೆಯಿತು. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ
ಉದ್ಘಾಟಿಸಿ ಮಾತನಾಡಿ ” ಗಣೇಶೋತ್ಸವದಲ್ಲಿ ವಿವಿಧ ನಮ್ಮದೇ ಆದ ಕಲೆಗಳನ್ನು ಉಳಿಸಿ ಬೆಳೆಸುವ ಮತ್ತು ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಕ್ರಮವಿದು” ಎಂದು ಹೇಳಿದರು.


.
ಸಭಾಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುರು ಪ್ರಸಾದ್ ತೋಟ ವಹಿಸಿದ್ದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಸಾರ್ವಜನಿಕ ಆರಾಧನಾ ಸಮಿತಿ ಅಧ್ಯಕ್ಷ ಸವಿತಾರ ಮುಡೂರು, ಉತ್ಸವ ಸಮಿತಿ ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ , ಸಾಂಸ್ಕೃತಿಕ ಸ್ಪರ್ಧೆಗಳ ಸಂಚಾಲಕ ಸತೀಶ್ ಪಂಜ, ಚೆನ್ನೆಮಣೆ ಮತ್ತು ಕೇರಂ ಸ್ಪರ್ಧೆ ಸಂಚಾಲಕ ಮನೋಹರ ಕಾರ್ಜ ಪಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುದರ್ಶನ ಪಟ್ಟಾಜೆ ಪ್ರಾರ್ಥಿಸಿದರು. ಕುಸುಮಾದರ ಕೆರೆಯಡ್ಕ ಸ್ವಾಗತಿಸಿದರು. ಕೌಶಿಕ್ ಕುಳ ನಿರೂಪಿಸಿದರು. ಜನಾರ್ದನ ನಾಗತೀರ್ಥ ವಂದಿಸಿದರು.