ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ-2025ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.27 ರಿಂದ ಆ.29 ತನಕ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿದೆ.
ಆ.27: ಕಾರ್ಯಕ್ರಮಗಳು:
ಆ.27.ರಂದು ಪೂ.ಗಂ.9 ರಿಂದ ಪ್ರತಿಷ್ಠೆ, ಗಣಪತಿ ಹೋಮ, ಶ್ರೀ ಮಹಾಗಣಪತಿ ಗೆ ಬೆಳ್ಳಿ ಪಾಶಾಂಕುಶ ಸಮರ್ಪಣೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.ರಾತ್ರಿ ಮಹಾ ಪೂಜೆ, ಪ್ರಸಾದ ವಿತರಣೆ ಜರುಗಲಿದೆ.ಸಂಜೆ ಭಜನಾ ಸಂಕೀರ್ತನೆ, ರಾತ್ರಿ ಮಹಾ ಪೂಜೆ ಪ್ರಸಾದ ವಿತರಣೆ ನಡೆಯಲಿದೆ.
ಪೂ. ಗಂ.9.30ಕ್ಕೆ ಕ್ರೀಡಾ ಸ್ಪರ್ಧೆಯನ್ನು ವಲಯ ಅರಣ್ಯಾಧಿಕಾರಿ ಶ್ರೀಮತಿ ಸಂಧ್ಯಾ ಉದ್ಘಾಟಿಸಲಿದ್ದಾರೆ.ಸಾಂಸ್ಕೃತಿಕ ಸ್ಪರ್ಧೆಯನ್ನು ಕೇನ್ಯ ಶಾರದಾ ಗಾರ್ಡನ್ ಶ್ರೀಮತಿ ಮಮತಾ ಎಸ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಸಾಂಸ್ಕೃತಿಕ ಸ್ಪರ್ಧೆಗಳು ಎಲ್ ಕೆ ಜಿ, ಯು ಕೆ ಜಿ, ಕಿರಿಯ, ಹಿರಿಯ, ಮಹಿಳಾ , ಸಾರ್ವಜನಿಕ ವಿಭಾಗಗಳಲ್ಲಿ ಜರುಗಲಿದೆ. ಪೂ.ಗಂ.9.30ರಿಂದ ರಂಗೋಲಿ, ರಸಪ್ರಶ್ನೆ, ಭಾಷಣ, ಅ.ಗಂ.2ರಿಂದ ಭಕ್ತಿ ಗೀತೆ ಮತ್ತು ಮೋಜಿನ ಆಟಗಳು ಜರುಗಲಿದೆ.
ಕ್ರೀಡಾ ಸ್ಪರ್ಧೆಗಳು ಪೂ.ಗಂ.10 ರಿಂದ ಅಂಗನವಾಡಿ ಮತ್ತು ಎಲ್ ಕೆ ಜಿ, ಯು ಕೆ ಜಿ ಮಕ್ಕಳಿಗೆ ಕಪ್ಪೆ ಜಿಗಿತ, ಕಾಳು ಹೆಕ್ಕುವುದು. ಮಹಿಳೆಯರಿಗೆ ಬಾಟಲಿಗೆ ನೀರು ತುಂಬಿಸುವುದು, ಸ್ಕಿಪ್ಪಿಂಗ್ (ಹಗ್ಗ ಜಿಗಿತ), ಹುಡುಗಿಗೆ ಜಡೆ ಬರೆಯುವುದು, ಮಡಿಕೆ ಒಡೆಯುವುದು, ಹಗ್ಗ ಜಗ್ಗಾಟ, ಪುರುಷರಿಗೆ ನಿಧಾನ ದ್ವಿ-ಚಕ್ರ ವಾಹನ ಚಾಲನೆ, ನಿಧಾನ ಸೈಕಲ್ ಚಾಲನೆ,
ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ಜರುಗಲಿದೆ. ಪ್ರಥಮ ರೂ. 2000, ದ್ವಿತೀಯ ರೂ.1000 ನಗದು ಬಹುಮಾನವಿರುತ್ತದೆ. ಹಗ್ಗ ಜಗ್ಗಾಟ ಸ್ಪರ್ಧೆ ಪುರುಷರ ವಿಭಾಗದ ಸ್ಪರ್ಧೆ (7 ಸದಸ್ಯರ ತಂಡ) ಪ್ರಥಮ ರೂ.2000,ದ್ವಿತೀಯ ರೂ.1000 ನಗದು ಬಹುಮಾನ. ಮಹಿಳಾ ವಿಭಾಗದಲ್ಲಿ (7 ಸದಸ್ಯರ ತಂಡ) ಪ್ರಥಮ ರೂ.1500, ದ್ವಿತೀಯ ರೂ.1000 ನಗದು ಬಹುಮಾನ.








ಅ. ಗಂ.2.30 ರಿಂದ ಸೂರ್ಯ – ಹೊನಲು ಬೆಳಕಿನ ಪುರುಷರ 65 ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟ ಪ್ರಥಮ ರೂ.6025, ದ್ವಿತೀಯ ರೂ 4025, ಸೆಮಿ ಫೈನಲ್ ನಲ್ಲಿ ನಿರ್ಗಮಿತ ಎರಡು ತಂಡಗಳಿಗೆ ತಲಾ ರೂ.1025 ನಗದು ಬಹುಮಾನವಿರುತ್ತದೆ.
ಆ.28: ಕಾರ್ಯಕ್ರಮಗಳು:
.ಉತ್ಸವ ಕಾರ್ಯಕ್ರಮ ಬೆಳಗ್ಗಿನ ಪೂಜೆ ಪ್ರಸಾದ ವಿತರಣೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ. ಅಪರಾಹ್ನ ಭಜನಾ ಸಂಕೀರ್ತನೆ, ಸಂಜೆ ಕುಣಿತ ಭಜನೆ, ರಾತ್ರಿ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ,
ಅ. ಗಂಟೆ 2 ರಿಂದ ಭಜನಾ ಸಂಕೀರ್ತನೆ.ರಾತ್ರಿ ಮಹಾ ಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂ7.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುರುಪ್ರಸಾದ್ ತೋಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬೆಂಗಳೂರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ ವಿ ಪಾಲ್ಗೊಳ್ಳಲಿದ್ದಾರೆ. ಸುಳ್ಯ , ಸಂಸ್ಕೃತಿ ಚಿಂತಕ ಉದಯಭಾಸ್ಕರ್ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕ ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂ.ಗಂ.6 ರಿಂದ 7ತನಕ ಕು.ಸುಮಾ ಕೋಟೆ ರವರಿಂದ ಗಾನ ಸುಧೆ, ರಾತ್ರಿ .ಗಂ 8 ರಿಂದ ಗುರುದೇವ್ ಅಕಾಡಮಿ ಆಫ್ ಫೈನ್ ಆರ್ಟ್ಸ್ ಮಂಡ್ಯ ಮತ್ತು ಮೈಸೂರು ಕಲಾವಿದರಿಂದ ನೃತ್ಯ ವೈವಿಧ್ಯ ಪ್ರದರ್ಶನಗೊಳ್ಳಲಿದೆ.
ಆ.29 : ಶೋಭಾಯಾತ್ರೆ:
ಆ.29 ರಂದು ಬೆಳಗಿನ ಪೂಜೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಲಿದೆ.
ಸಂ.ಗಂ. 3ರಿಂದ ವೈಭವದ ಶೋಭಾಯಾತ್ರೆಯು ದೇಗುಲದ ವಠಾರದಿಂದ ಪಂಜ ಪೇಟೆಯ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಪಂಜ ಹೊಳೆಯ ಸೇತುವೆ ಬಳಿ ಜಲಸ್ತಂಭನ ಜರುಗಲಿದೆ. ಶೋಭಾಯಾತ್ರೆಯಲ್ಲಿ
ತುಳುನಾಡಿನ ಹೆಮ್ಮೆಯ ಹುಲಿ ವೇಷ, ಕೀಲು ಕುದುರೆ ,ಕುಣಿತ ಭಜನೆ, ಮೊದಲಾದ ತಂಡಗಳು ಪಾಲ್ಗೊಳ್ಳಲಿವೆ.










