ಗುತ್ತಿಗಾರು: ಸ್ವಾಸ್ಟ್ರ ಸಂಕಲ್ಪ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಾಹಿತಿ ಕಾರ್ಯಗಾರ ನಡೆಯಿತು.

ಈ ಕಾಯ೯ಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿಯವರು ದೀಪಪ್ರಜ್ವಲನೆ ಮಾಡಿ ಶಾಲಾ ಮಕ್ಕಳು ದುಶ್ಚಟಗಳಿಂದ ದೂರವಿದ್ದು ಶಾಲಾ ಚಟುವಟಿಕೆ ಹಾಗೂ ತಮ್ಮ ನಡವಳಿಕೆಯನ್ನು ಹಿರಿಯರಿಗೆ ಗೌರವ ಕೊಡುವುದು ಹಾಗೂ ಇನ್ನಿತರ ಉತ್ತಮ ಕೆಲಸಗಳನ್ನು ನಿರ್ವಹಿಸಿ ಕೀರ್ತಿವಂತರಾಗಿ ಎಂದು ಶುಭ ಹಾರೈಸಿದರು.

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಹತ್ವವನ್ನು ತರಬೇತುದಾರರಾದ ಲೋಕೇಶ ಪೀರನ ಮನೆಯವರು ಆರೋಗ್ಯದ ಬಗ್ಗೆ ನಿಯಮಿತವಾದ ಯೋಗ ವ್ಯಾಯಾಮ ಹಾಗೂ ಸಂಸ್ಕಾರ ಮತ್ತು ಪೋಷಕರು ಮತ್ತು ವಿದ್ಯಾರ್ಥಿ ವೃಂದ ಉತ್ತಮ ಸಮಾಜಕ್ಕಾಗಿ ದುಶ್ಚಟ ದುರಾಭ್ಯಾಸದಿಂದ ಮುಕ್ತರಾಗಿ ಶಾಲಾ ಮಕ್ಕಳು ಸತ್ ಪ್ರಜೆಯಾಗಿ ಬೆಳೆಯಲಿ ಹಾಗೂ ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ಯಾವ ರೀತಿಯಲ್ಲಿ ಮಾಡಬಹುದೆಂದು ಪ್ರಾತಿಕ್ಷಿತೆ ಮೂಲಕ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಶುಂಪಾಲರಾದ ಶ್ರೀಮತಿ ಚೆನ್ನಮ್ಮ ರವರು ವಹಿಸಿದ್ದರು.
ಪ್ರಾಸ್ತಾವಿಕ ನುಡಿಗಳನ್ನು ವಲಯ ಮೇಲ್ವಿಚಾರಕರಾದ ರಾಜೇಶ್. ಪಿ.ಯವರು ಯೋಜನೆಯ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.