ಬೆಟ್ಟಂಪಾಡಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ

0

ಆಸ್ಪತ್ರೆಗೆ ದಾಖಲು, ಚೇತರಿಕೆ

ಸುಳ್ಯದ ಶಾಂತಿನಗರ ಬೆಟ್ಟಂಪಾಡಿಯ ಯುವಕನೋರ್ವ ವಿಷ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ನಡೆದಿದೆ. ಸ್ಥಳೀಯರು ಕೂಡಲೇ ಆತನನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಇದೀಗ ಬಂದ ಮಾಹಿತಿ ಪ್ರಕಾರ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ

ವಿಷ ಸೇವನೆ ಮಾಡಿದ ಯುವಕ ಜಬ್ಬಾರ್ ಎಂದು ಗುರುತಿಸಲಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.